HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಪ್ರಯಾಗ್‌ರಾಜ್ ನಲ್ಲಿಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆಪ್ರಯಾಗ್‌ರಾಜ್ ನಲ್ಲಿಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

09:21 PM Jan 13, 2025 IST | ಅಮೃತ ಮೈಸೂರು
Advertisement

ಪ್ರಯಾಗ್‌ರಾಜ್: ಇಡೀ ವಿಶ್ವದ ಗಮನ ಸೆಳೆದಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭಕ್ತರು,ಸಾಧು ಸಂತರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಮಹಾ ಕುಂಭಮೇಳಕ್ಕೆ‌ ವಿದ್ಯುಕ್ತ ಚಾಲನೆ ದೊರೆತಿದ್ದು‌ ಎಲ್ಲೆಲ್ಲೂ ಸಂಭ್ರಮ ಮನೆಮಾಡಿದೆ.

Advertisement

144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ.

ಇಂದಿನಿಂದ 44 ದಿನಗಳ ಕಾಲ ಮಹಾಕುಂಭ ಸಂಭ್ರಮ ಕಣ್ತುಂಬಿಕೊಳ್ಳಬಹುದಾಗಿದೆ.

ಮಹಾ ಕುಂಭಮೇಳಕ್ಕೆ ಸೋಮವಾರ ಮುಂಜಾನೆ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಫೆಬ್ರವರಿ 26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಗಂಗಾ, ಯಮುನಾ,ಹಾಗೂ ಗುಪ್ತಗಾಮಿನಿ ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯುತ್ತಿದೆ.

ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ಸಿದ್ದತೆ ಮಾಡಲಾಗಿದೆ, ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದೆ. ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆಯಾಗಿದೆ. ಅವಘಡಗಳು ನಡೆಯದಂತೆ ಸರ್ಕಾರ ಅತೀ ಎಚ್ಚರಿಕೆ ವಹಿಸಿದೆ.

ನದಿಯ ಉದ್ದಕ್ಕೂ 12 ಕಿಲೋ ಮೀಟರ್ ಘಾಟ್‌ಗಳ ನಿರ್ಮಾಣ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಎನ್‌ಡಿಆರ್‌ಎಫ್ ಪಡೆಯಿಂದ ನೀರಿನ ಮೇಲೆ ಅಂಬುಲೆನ್ಸ್ ನಿರ್ಮಾಣ ಮಾಡಲಾಗಿದೆ. ಐಸಿಯು ಸೌಲಭ್ಯ ಹೊಂದಿರುವ ಅಂಬುಲೆನ್ಸ್‌ಗಳನ್ನು ನದಿ ನೀರಿನ ಮೇಲೆ ನಿಲ್ಲಿಸಲಾಗಿದೆ.ಇದರಲ್ಲಿ ವೈದ್ಯಕೀಯ ಸಿಬ್ಬಂದಿ, ಹಾಸಿಗೆಗಳು ಆಮ್ಲಜನಕ ಮತ್ತು ವೆಂಟಿಲೇಟರ್‌ಗಳ ಸೌಲಭ್ಯ ಕಲ್ಪಿಸಲಾಗಿದೆ.

ನದಿಯಲ್ಲಿ ಸ್ನಾನ ಮಾಡುವವರ ಸುರಕ್ಷತೆಗಾಗಿ 800 ಪ್ರಾದೇಶಿಕ ಸಶಸ್ತ್ರ ಕಾನ್ಸ್‌ಟೇಬಲ್,150 ಎಸ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜಿಸಲಾಗಿದೆ.

ಪ್ರಯಾಗ್‌ರಾಜ್ ನಲ್ಲಿ
ಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

ಪ್ರಯಾಗ್‌ರಾಜ್: ಇಡೀ ವಿಶ್ವದ ಗಮನ ಸೆಳೆದಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭಕ್ತರು,ಸಾಧು ಸಂತರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಮಹಾ ಕುಂಭಮೇಳಕ್ಕೆ‌ ವಿದ್ಯುಕ್ತ ಚಾಲನೆ ದೊರೆತಿದ್ದು‌ ಎಲ್ಲೆಲ್ಲೂ ಸಂಭ್ರಮ ಮನೆಮಾಡಿದೆ.

144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ.

ಇಂದಿನಿಂದ 44 ದಿನಗಳ ಕಾಲ ಮಹಾಕುಂಭ ಸಂಭ್ರಮ ಕಣ್ತುಂಬಿಕೊಳ್ಳಬಹುದಾಗಿದೆ.

ಮಹಾ ಕುಂಭಮೇಳಕ್ಕೆ ಸೋಮವಾರ ಮುಂಜಾನೆ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಫೆಬ್ರವರಿ 26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಗಂಗಾ, ಯಮುನಾ,ಹಾಗೂ ಗುಪ್ತಗಾಮಿನಿ ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯುತ್ತಿದೆ.

ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ಸಿದ್ದತೆ ಮಾಡಲಾಗಿದೆ, ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದೆ. ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆಯಾಗಿದೆ. ಅವಘಡಗಳು ನಡೆಯದಂತೆ ಸರ್ಕಾರ ಅತೀ ಎಚ್ಚರಿಕೆ ವಹಿಸಿದೆ.

ನದಿಯ ಉದ್ದಕ್ಕೂ 12 ಕಿಲೋ ಮೀಟರ್ ಘಾಟ್‌ಗಳ ನಿರ್ಮಾಣ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಎನ್‌ಡಿಆರ್‌ಎಫ್ ಪಡೆಯಿಂದ ನೀರಿನ ಮೇಲೆ ಅಂಬುಲೆನ್ಸ್ ನಿರ್ಮಾಣ ಮಾಡಲಾಗಿದೆ. ಐಸಿಯು ಸೌಲಭ್ಯ ಹೊಂದಿರುವ ಅಂಬುಲೆನ್ಸ್‌ಗಳನ್ನು ನದಿ ನೀರಿನ ಮೇಲೆ ನಿಲ್ಲಿಸಲಾಗಿದೆ.ಇದರಲ್ಲಿ ವೈದ್ಯಕೀಯ ಸಿಬ್ಬಂದಿ, ಹಾಸಿಗೆಗಳು ಆಮ್ಲಜನಕ ಮತ್ತು ವೆಂಟಿಲೇಟರ್‌ಗಳ ಸೌಲಭ್ಯ ಕಲ್ಪಿಸಲಾಗಿದೆ.

ನದಿಯಲ್ಲಿ ಸ್ನಾನ ಮಾಡುವವರ ಸುರಕ್ಷತೆಗಾಗಿ 800 ಪ್ರಾದೇಶಿಕ ಸಶಸ್ತ್ರ ಕಾನ್ಸ್‌ಟೇಬಲ್,150 ಎಸ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜಿಸಲಾಗಿದೆ.

Advertisement
Tags :
PrayagrajUttar Pradesh
Advertisement
Next Article