HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಯಾವ ಧರ್ಮವೂ ಅಧರ್ಮ, ಅನೀತಿ ಬೋಧಿಸಿಲ್ಲ:ಮಹದೇವಪ್ಪ

10:23 PM Nov 20, 2024 IST | ಅಮೃತ ಮೈಸೂರು
Advertisement

ಮೈಸೂರು: ಯಾವ ಧರ್ಮದಲ್ಲೂ ಅಧರ್ಮ, ಅನೀತಿ ಬೋಧಿಸಿಲ್ಲ, ದ್ವೇಷ ಹರಡಲು ಹೇಳಿಲ್ಲ,ಆದರೆ ಕೆಲವರು ಧರ್ಮದ ಹೆಸರಿನಲ್ಲಿ ಇತರರ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದರು

Advertisement

ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕ ನಗರದ ಜಗನ್ ಮೋಹನ ಅರಮನೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ, ಉರ್ದು ದಿನಾಚರಣೆ, ಕನ್ನಡ ರಾಜ್ಯೋತ್ಸವ ಹಾಗೂ ಶೈಕ್ಷಣಿಕ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ನಾವೆಲ್ಲರೂ ಭಾರತೀಯರು ಎಂಬ ಮನೋಭಾವ ಪ್ರತಿಯೊಬ್ಬರಲ್ಲೂ ಮೂಡಬೇಕು, ಸಂವಿಧಾನದ ಆಶಯಕ್ಕೆ ನಿಷ್ಠಾವಂತರಾಗಿರಬೇಕು, ಜೀವನದ ಮೌಲ್ಯಗಳ ಮೇಲೆ ಧರ್ಮ ಸೃಷ್ಠಿಯಾಗಿದೆ. ಹಾಗಾಗಿ ಮನುಷ್ಯರು ಸಾಮರಸ್ಯದಿಂದ ಬದುಕಬೇಕು ಎಂದು ಕರೆ ನೀಡಿದರು.

ಈ ದೇಶದ ಅಲ್ಪ ಸಂಖ್ಯಾತರು, ಬಹುಸಂಖ್ಯಾತರ ಮೇಲೆ ನಂಬಿಕೆ ಇಟ್ಟು ಬದುಕುತ್ತಿದ್ದಾರೆ. ಅವರ ರಕ್ಷಣೆ ಬಹುಸಂಖ್ಯಾತರ ಕರ್ತವ್ಯ ಮತ್ತು ಜವಬ್ದಾರಿಯಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ್ದಾರೆ. ಆದರೆ ಪ್ರಸ್ತುತ ಕೋಮುವಾದದ ನೆರಳು ಭಾರತದ ಪ್ರಜಾಪ್ರಭುತ್ವದ ಮೇಲೆ ತನ್ನ ಕಬಂಧ ಬಾಹು ಚಾಚುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಶಾಸಕ ತನ್ವೀರ್ ಸೇಠ್ ಮಾತನಾಡಿ, ಸಮಾಜ ನಮ್ಮೊಂದಿಗಿದೆ, ಅದರಂತೆ ನಾವೂ ಸಮಾಜದ ಜೊತೆಗೆ ಇರುವುದನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಯಾರು ಅನ್ಯ ಧರ್ಮಕ್ಕೆ ಗೌರವ ನೀಡುವುದಿಲ್ಲವೋ, ಅವರು ತಮ್ಮ ಧರ್ಮವನ್ನು ಎಂದಿಗೂ ರಕ್ಷಣೆ ಮಾಡಿಕೊಳ್ಳಲಾಗುವುದಿಲ್ಲ ಎಂದು ತಿಳಿಸಿದರು.

ವಿಧಾನ‌ ಪರಿಷತ್ ಸದಸ್ಯ ಡಾ.ಯತೀಂದ್ರ,
ಶಾಸಕ ಕೆ.ಹರೀಶ್ ಗೌಡ, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Tags :
H.C.MahadevappaMysore
Advertisement
Next Article