HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ: ಮೋದಿ ವಿರುದ್ಧ ಸಿಎಂ ಟೀಕೆ

08:30 PM Dec 08, 2024 IST | ಅಮೃತ ಮೈಸೂರು
Advertisement

ಸಂಡೂರು: ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

Advertisement

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮುಖ್ಯ ಮಂತ್ರಿಗಳು ಮಾತನಾಡಿದರು.

ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರರೆಗೂ ಸರಣಿ ಸುಳ್ಳು ಗಳನ್ನು ಹೇಳಿದರು. ನೀವು ಆರೋಪ ಸಾಬೀತು ಪಡಿಸಿ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ವ್ಯಂಗ್ಯವಾಡಿದರು.

ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ಸಿದ್ದು ಹೇಳಿದರು.

2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ ಇದನ್ನು ಪ್ರಶ್ನಿಸಬೇಕಿದೆ ಎಂದು ಜನತೆಗೆ ತಿಳಿಸಿದರು.

ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ ಮುಗಿಸಿ ಹೋದರು ಎಂದು ಲೇವಡಿ ಮಾಡಿದರು.

ಬಳ್ಳಾರಿ ಜಿಲ್ಲೆಯ ಜನತೆಯನ್ನು ಭಯದಲ್ಲಿಟ್ಟು ರಿಪಬ್ಲಿಕ್ ಬಳ್ಳಾರಿ ಮಾಡಿದ್ದ ಜನಾರ್ದನರೆಡ್ಡಿಯವರಿಗೆ ಬಿಜೆಪಿ ಈ ಚುನಾವಣೆಯ ಉಸ್ತುವಾರಿ ವಹಿಸಿತ್ತು. ಆದರೆ, ಸಂಡೂರಿನ ಜನತೆ ರೆಡ್ಡಿಯವರ ಹಣಕ್ಕೆ, ಭಯಕ್ಕೆ, ಆಮಿಷಕ್ಕೆ, ಸುಳ್ಳುಗಳಿಗೆ, ಅಪಪ್ರಚಾರಕ್ಕೆ ಸೋಲಲಿಲ್ಲ. ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸಿದ್ದೀರಿ ಧನ್ಯವಾದಗಳು ಎಂದು ಸಿಎಂ ಹೇಳಿದರು.

ನನ್ನ ವಿರುದ್ಧ ಸುಳ್ಳು ಕೇಸು, ಸುಳ್ಳು ಆರೋಪಗಳ ಮೂಲಕ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ.

ಸಂಡೂರಿನಲ್ಲಿ ಬಡವರು ಹೆಚ್ಚಾಗಿರುವುದರಿಂದ ಮತ್ತು ನಂಜುಂಡಪ್ಪ ಅವರ ವರದಿಯಲ್ಲಿ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿ ಇರುವುದರಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡಲಾಗುವುದು ಎಂದು ಇದೇ ವೇಳೆ ಸಿದ್ದರಾಮಯ್ಯ ಘೋಷಿಸಿದರು.‌

Advertisement
Tags :
Sanduru CM Siddaramaiah
Advertisement
Next Article