For the best experience, open
https://m.navayuganews.com
on your mobile browser.
Advertisement

ಮಂಡ್ಯ,ಆ.5: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಕೌಂಟರ್‌ ಕೊಡಲು ಎರಡು ದಿನಗಳ ಕಾಲ ಕಾಂಗ್ರೆಸ್‌ ಜನಾಂದೋಲನ ಆರಂಭಿಸಿದ್ದು ಕೈ ಪಡೆ‌ ಸಿಎಂ ಸಿದ್ದರಾಮಯ್ಯ ಪರ ನಿಂತಿದೆ.

Advertisement

ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಜನಾಂದೋಲನ ಸಮಾವೇಶ ಮೊದಲ ದಿನ ಕಾಂಗ್ರೆಸ್‌ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಮಾತನಾಡಿ, ಸಿದ್ದರಾಮಯ್ಯ ಮಾಡಬಾರದ ತಪ್ಪು ಮಾಡಿದ್ದಾರಾ,ಅಥವಾ ಕಳ್ಳತನ ಮಾಡಿದ್ದಾರ, ಸರ್ಕಾರಿ ಜಮೀನು ಹೊಡೆದಿದ್ದಾರ, ಸರ್ಕಾರ ಜಮೀನು ಪಡೆದು ಬೇರೆ ಜಾಗ ಕೊಟ್ಟಿದೆ ಅದರಲ್ಲಿ ತಪ್ಪೇನಿದೆ ಎಂದು ಕಾರವಾಗಿ ಪ್ರಶ್ನಿಸಿದರು.

ನಿಮ್ಮ ಸರ್ಕಾರದಲ್ಲಾದ ಹಗರಣಗಳ ಬಗ್ಗೆ ಮೊದಲು ಉತ್ತರ ಕೊಡಿ ಎಂದು ಬಿಜೆಪಿಗರನ್ನು ಆಗ್ರಹಿಸಿದ ಡಿ ಕೆಶಿ, ಆನಂತರ ಪಾದಯಾತ್ರೆ ಮಾಡಿ. ಸಿದ್ದರಾಮಯ್ಯರನ್ನ ಮುಟ್ಟಲು ನಿಮ್ಮ ಹಣೆಯಲ್ಲೂ ಬರೆದಿಲ್ಲ ತಿಳ್ಕೊಳ್ಳಿ ಎಂದು ಗುಡುಗಿದರು.

ಹಿಂದುಳಿದ ವರ್ಗದ ನಾಯಕ ಮತ್ತೆ ಸಿಎಂ ಆಗಿದ್ದು ನಿಮಗೆ ಸಹಿಸಲು ಆಗ್ತಿಲ್ಲ ಅಲ್ವಾ ಅದಕ್ಕೇ‌ ಹೀಗಾಡ್ತಾ ಇದೀರಾ ಎಂದು ಚಾಟಿ ಬೀಸಿದರು.

Advertisement
Tags :
Advertisement