HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ದೇವೇಗೌಡರು, ಕುಮಾರಸ್ವಾಮಿ ಒಬ್ಬ ಒಕ್ಕಲಿಗರನ್ನೂ ಬೆಳೆಯಲು ಬಿಡಲ್ಲ:ಸಿಎಂ

ಚನ್ನಪಟ್ಟಣದ ದೊಡ್ಡ ಮಳೂರಿನಲ್ಲಿ ಯೋಗೇಶ್ವರ್ ಪರ ಬೃಹತ್ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
05:35 PM Nov 11, 2024 IST | ಅಮೃತ ಮೈಸೂರು
Advertisement

ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.

Advertisement

ದೊಡ್ಡ ಮಳೂರಿನಲ್ಲಿ ಯೋಗೇಶ್ವರ್ ಪರ ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿಎಂ,ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ರೈತ ಸಮುದಾಯ, ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ ಮತ್ತು ಗೌರವ ಹಾಗೂ ಕಾಳಜಿ ಇದೆ, ಹಾಗಾಗಿ ರೈತ ಕುಲದ ಉದ್ದಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಡ್ಯ ಲೋಕಸಭೆಯಲ್ಲಿ, ರಾಮನಗರ ವಿಧಾನಸಭೆಯಲ್ಲಿ ನಿಖಿಲ್ ಸೋತಿದ್ದಾರೆ. ಈಗ ಚನ್ನಪಟ್ಟಣಕ್ಕೆ ಕರೆತಂದು ನಿಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಭಾವ, ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರ ಗೆಲುವಿಗೆ ಯೋಗೇಶ್ವರ್ ಅವರು ಬಹಳ ಶ್ರಮಿಸಿದರು. ಆಗಲೇ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ ಗೆಲ್ಲಿಸುವ ಭರವಸೆ ನೀಡಿದ್ದರು. ಆದರೆ ಚುನಾವಣೆ ಬಂದಾಗ ಕೈ ಕೊಟ್ಟರು ಎಂದು ವ್ಯಂಗ್ಯವಾಡಿದರು.‌

ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಬ್ಬ ಒಕ್ಕಲಿಗರನ್ನೂ ಬೆಳೆಯಲು ಬಿಡುವುದಿಲ್ಲ. ನಾನು ಹಿಂದುಳಿದವನು ಅಂತ ನನ್ನನ್ನು ವಿರೋಧಿಸ್ತಾರೆ, ಓಕೆ. ಆದರೆ, ವೈ.ಕೆ.ರಾಮಯ್ಯ, ನಾಗೇಗೌಡ, ಬಚ್ಚೇಗೌಡ, ವರದೇಗೌಡ, ಪಟ್ಟಣ್ಣ, ಚಲುವರಾಯಸ್ವಾಮಿ, ಬಾಲಕೃಷ್ಣ, ಭೈರೇಗೌಡ, ಕೆ.ಆರ್.ಪೇಟೆ ಚಂದ್ರಶೇಖರ್ ಸೇರಿ ಸಾಲು ಸಾಲು ಒಕ್ಕಲಿಗರನ್ನು ರಾಜ್ಯದಲ್ಲಿ ಮುಗಿಸಿದರು ರಾಜ್ಯದಲ್ಲಿ ಒಕ್ಕಲಿಗ ನಾಯಕತ್ವವೇ ಬೆಳೆಯದಂತೆ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಬುದ್ದಿವಂತ ಒಕ್ಕಲಿಗರು, ರಾಜಕೀಯ ಪ್ರಜ್ಞೆ ಇರುವ ಒಕ್ಕಲಿಗರು ಯಾರನ್ನೂ ದೇವೇಗೌಡರು ಬೆಳೆಯಲು ಬಿಡದೆ ಮುಗಿಸ್ತಾರೆ. ಈಗ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರನ್ನೂ ಮುಗಿಸುವ ಪರಯತ್ನ ಮಾಡ್ತಿದ್ದಾರೆ. ಆದರೆ ಇದು ಆಗಲ್ಲ. ನಾನು ಜಿ.ಟಿ.ದೇವೇಗೌಡರಿಗೂ ಎಚ್ಚರಿಸಿದ್ದೀನಿ. ಅಲ್ಲಿದ್ದರೆ ಮುಗಿಸ್ತಾರೆ. ಬೇಗ ಹೊರಗೆ ಬಂದ್ರೆ ನಿಮಗೆ ಒಳ್ಳೆಯದು ಎಂದು ಹೇಳಿದ್ದೇನೆ. ಮನೆ ಮಗ ಅಂತಿದ್ದ ಬಿ.ಎಲ್.ಶಂಕರ್, ವೈ.ಕೆ.ರಾಮಯ್ಯ ಅವರನ್ನೇ ಮುಗಿಸಿದವರು ಇನ್ನು ಯೋಗೇಶ್ವರ್ ಅವರನ್ನು ಸಹಿಸ್ತಾರಾ ಎಂದು ವ್ಯಂಗ್ಯವಾಗಿ ಸಿದ್ದು ಪ್ರಶ್ನಿಸಿದರು.

ನಾನು, ಜಾಲಪ್ಪ ಅವರು ಇಲ್ಲದೇ ಹೋಗಿದ್ದರೆ 1994 ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಲು ಸಾಧ್ಯವೇ ಇರಲಿಲ್ಲ. ದೇವೇಗೌಡರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ರಾಷ್ಟ್ರೀಯ ಅಧ್ಯಕ್ಷರಾದ ಎಸ್.ಆರ್.ಬೊಮ್ಮಾಯಿ ಸಿದ್ದರಿರಲಿಲ್ಲ. ಏಕೆಂದರೆ ಇವರು ಬೊಮ್ಮಾಯಿ ಸರ್ಕಾರವನ್ನು ಕೆಡವಿದ್ದರು. ಆದರೂ ಆ ಸಂದರ್ಭದಲ್ಲಿ ನಾವೆಲ್ಲಾ ಒಟ್ಟಾಗಿ ದೇವೇಗೌಡರ ಪರವಾಗಿ ನಿಂತೆವು. ಈಗ ಸಿದ್ದರಾಮಯ್ಯ ಅವರಿಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ.ಇದು ಪಾಳೇಗಾರಿಕೆ ಅಲ್ವಾ ದೇವೇಗೌಡರೇ ಎಂದು ಪ್ರಶ್ನಿಸಿದರು.

ಆಕಸ್ಮಿಕವಾಗಿ ಪ್ರಧಾನಿ ಆದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ, ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ ಬಿಜೆಪಿ ಯಿಂದ ಬೇರೆ ಯಾರಾದರೂ ನಿಂತಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಚನ್ನಪಟ್ಟಣದಲ್ಲಿ ನಿಂತು ಮತ ಕೇಳ್ತಾ ಇದ್ರಾ ಒಂದು‌ ವೇಳೆ ಎನ್ ಡಿ ಎ ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧಿಸಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಇದ್ದು ಮತ ಕೇಳ್ತಿದ್ರಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆದೆ ಅಂತ ದೇವೇಗೌಡರಿಗೆ ಹೊಟ್ಟೆಯುರಿ. ಅದಕ್ಕೇ ನಮ್ಮ ಸರ್ಕಾರ ಕಿತ್ತು ಹಾಕುತ್ತೇನೆ ಎನ್ನುತ್ತಿದ್ದಾರೆ. ರಾಜ್ಯದ ಜನತೆ ಆರಿಸಿರುವ ನಮ್ಮ‌ ಸರ್ಕಾರವನ್ನು ಕುಮಾರಸ್ವಾಮಿ, ದೇವೇಗೌಡರಿಂದ ಕೀಳಲು ಸಾಧ್ಯವಿಲ್ಲ. ನಿಮ್ಮ ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ ಹೊರತು ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ ಏನು ಮಾಡ್ತೀರೊ ಮಾಡಿ ದೇವೇಗೌಡರೇ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು

ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ,ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಸಲ್ಲ ಎಂದು ಮೂರು ಬಾರಿ ಕಡಕ್ಕಾಗಿ ಘೋಷಿಸಿದರು.

Advertisement
Tags :
ChannapattanaCM SiddaramaiahDevegowda
Advertisement
Next Article