For the best experience, open
https://m.navayuganews.com
on your mobile browser.
Advertisement

ಮೈಸೂರು.4: ಚಿರತೆ‌ ದಾಳಿಯಿಂದ ಜಮೀನಿನಲ್ಲಿ ಮೇವು ಕಟಾವು ಮಾಡಲು ಹೋಗಿದ್ದ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

Advertisement

ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸವಣ್ಣ ಚಿರತೆ ದಾಳಿಯಿಂದ ಗಾಯಗೊಂಡಿದ್ದಾರೆ,ಅವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಮತ್ತು ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದ್ದು,ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಚಿರತೆ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement
Tags :
Advertisement