HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಬಾಣಂತಿಯರ ಸಾವು:ಸರ್ಕಾರಕ್ಕೆ ಹೆಚ್ ಡಿ ಕೆ ತರಾಟೆ

05:15 PM Dec 07, 2024 IST | ಅಮೃತ ಮೈಸೂರು
Advertisement

ಬೆಂಗಳೂರು: ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ 327 ಬಾಣಂತಿಯರ ಸಾವಾಗಿದೆ ಇದು ಪ್ರಗತಿಯೆ ಎಂದು ಕೇಂದ್ರ ಸಚಿವ ಹೆಚ್ ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

Advertisement

ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ 327 ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು
ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.

ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್ ಸರಕಾರ, ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ ಇದೇನಾ ಮಹಿಳೆಯರ ಸಬಲೀಕರಣ ಎಂದು ಕಾರವಾಗಿ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ, ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣ (Ringer lactate infusion) ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆ‌ ಎನ್ನುವುದು ಆತಂಕಕಾರಿ‌ ವಿಷಯ, ಈ ಕಳಪೆ ದ್ರಾವಣ ಪೂರೈಸಿದ ಕಂಪನಿ ಯಾವುದು, ಅದು ಯಾರದ್ದು ಅವರ‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅನೇಕ ದಿನಗಳಿಂದ ಕಳಪೆ ಗ್ಲೂಕೋಸ್, ಔಷಧ ಪೂರೈಕೆ ಆಗುತ್ತಿದ್ದರೂ ಸರಕಾರ ಏನು ಮಾಡುತ್ತಿತ್ತು,ಇಷ್ಟು ಸೂಕ್ಷ್ಮ ವಿಚಾರವನ್ನು ಆರೋಗ್ಯ ಸಚಿವರು ಅಲಕ್ಷ್ಯ ಮಾಡಿದ್ದೇಕೆ ಸಚಿವರಿಗೆ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಗೊತ್ತೇ ಇರಲಿಲ್ಲವೇ ಎಂದು ಹೆಚ್ ಡಿ ಕೆ ಚಾಟಿ ಬೀಸಿದ್ದಾರೆ.

ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಲ್ಲ, ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಈ ಮರಣಗಳಿಂದ ಸರಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು ಎಂದು ಕುಮಾರಸ್ವಾಮಿ ಸರ್ಕಾರವನ್ನು‌ ಆಗ್ರಹಿಸಿದ್ದಾರೆ.

Advertisement
Tags :
BallariBangaluruH.D.Kumaraswami
Advertisement
Next Article