HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಕನ್ನಡ ಭಾಷೆ ತನ್ನದೆ ಆದ ಅಸ್ಮಿತೆ ಇದೆ:ಸಚಿವಮಹದೇವಪ್ಪ

08:32 PM Nov 01, 2024 IST | ಅಮೃತ ಮೈಸೂರು
Advertisement

ಮೈಸೂರು: ಕನ್ನಡ ಭಾಷೆಯು ತನ್ನದೇ ಅಸ್ಮಿತೆಯನ್ನು ಹೊಂದಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.

Advertisement

ಮೈಸೂರು ಜಿಲ್ಲಾಡಳಿತದ ವತಿಯಿಂದ ನಗರದ ಓವಲ್ ಮೈದಾನದಲ್ಲಿ ಆಯೋಜಿಸ ಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸಾಧಕರನ್ನು ಸನ್ಮಾನಿಸಿ ಮಹದೇವಪ್ಪ ಮಾತನಾಡಿದರು.

ಕನ್ನಡ ಭಾಷೆಗೆ ಸುಮಾರು 2 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಭಾಷೆ, ಬದುಕು, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಕನ್ನಡ ಭಾಷೆಯು ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ ಎಂದು ತಿಳಿಸಿದರು.

ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಬಳಕೆಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ ಕನ್ನಡ ಭಾಷೆಯ ಶ್ರೀಮಂತಗೊಳಿಸು ವಿಕೆಯೊoದಿಗೆ ಸಾಹಿತ್ಯ ಹಾಗೂ ಸಂಸ್ಕೃತಿಗಳ ಉತ್ತೇಜನಕ್ಕೂ ನಮ್ಮ ಸರಕಾರವು ಸಾಕಷ್ಟು ಒತ್ತು ನೀಡಿದೆ ಎಂದು ತಿಳಿಸಿದರು.

ತಂತ್ರಜ್ಞಾನದ ವೇಗದಲ್ಲಿ ಹಾಗೂ ಇಂದಿನ ಡಿಜಿಟಲ್ ಲೋಕದಲ್ಲಿ ಕನ್ನಡ ಭಾಷೆ ಹಿಂದುಳಿಯದoತೆ ಸರಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕನ್ನಡದಲ್ಲಿ ಯೂನಿಕೋಡ್ ಅಕ್ಷರ ವಿನ್ಯಾಸ, ಪರಿವರ್ತಕಗಳು, ಚರವಾಣಿ (ಮೊಬೈಲ್ನಲ್ಲಿ) ಕನ್ನಡ ಬಳಕೆ, ಬ್ರೈಲ್ ಲಿಪಿಯಲ್ಲಿ ಕನ್ನಡ ಬಳಕೆ ಮತ್ತಿತರ ತಂತ್ರಾoಶಗಳನ್ನು ಅಭಿವೃದ್ಧಿಪಡಿಸಿದೆ ಎಂದು ಮಹದೇವಪ್ಪ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲೂ ಕನ್ನಡ ಲಿಪಿಯು ಹೆಚ್ಚು ಬಳಕೆಯಾಗುತ್ತಿರುವುದು ಸಂತಸದ ಬೆಳವಣಿಗೆ, ವಿಜ್ಞಾನ-ತಂತ್ರಜ್ಞಾನದ ಜೊತೆ ಜೊತೆಗೆ ಕನ್ನಡವನ್ನು ಬಳಸಿ, ಬೆಳೆಸಬೇಕಾಗಿದೆ ಎಂದು ಹೇಳಿದರು.

ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ. ಈ ಶುಭ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ‘ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬoಧಿಸಿದoತೆ ಹಾಗೂ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕನ್ನಡ ನಾಡು-ನುಡಿ, ಕಲೆ, ಸಂಸ್ಕೃತಿ ಜಾನಪದ, ಸಾಹಿತ್ಯ ಹೀಗೆ ವಿವಿಧ ಕ್ಷೇತ್ರ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕನ್ನಡ ನಾಡು-ನುಡಿಗೆ ವಿಶೇಷ ಆದ್ಯತೆ ನೀಡಿದೆ ಎಂದು ತಿಳಿಸಿದರು.

ನಮ್ಮ ಭಾಷೆಯ ಶ್ರೀಮಂತಿಕೆಗೆ ಹಲವಾರು ಮಹನೀಯರು ಶ್ರಮಿಸಿದ್ದಾರೆ. ಮುಂದಿನ ತಲೆಮಾರಿಗೆ ಈ ಭಾಷೆಯನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲೆ ಇದೆ. ಕೇವಲ ಭೌಗೋಳಿಕವಾಗಿ, ಆಡಳಿತಾತ್ಮಕವಾಗಿ ಏಕೀಕರಣವಾದರೆ ಸಾಲದು. ಕನ್ನಡದ ಮನಸ್ಸುಗಳು ಏಕೀಕರಣವಾಗಬೇಕು ಎಂದು ಮಹದೇವಪ್ಪ ತಿಳಿಸಿದರು.

ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಸಿ. ಎನ್.ಮಂಜೇಗೌಡ,ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿ ಪಂ‌ ಮುಖ್ಯ ಸಿಇಒ ಕೆ ಎಂ ಗಾಯಿತ್ರಿ, ಎಸ್ ಪಿ ವಿಷ್ಣುವರ್ಧನ್, ಉಪ ವಿಭಾಗಾಧಿಕಾರಿ ರಕ್ಷಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೆ ಹರೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Tags :
Kannada RajyotsavaMysore
Advertisement
Next Article