ಲೊಕಾಯುಕ್ತ ವಿಚಾರಣೆ ಎದುರಿಸಿದ ಮುಡಾ ಪ್ರಕರಣದ ಆರೋಪಿಗಳು
08:20 PM Oct 10, 2024 IST
|
ಅಮೃತ ಮೈಸೂರು
Advertisement
ಮೈಸೂರು: ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು ಪ್ರಕರಣದ ಎ 3 ಹಾಗೂ ಎ 4 ಆರೋಪಿಗಳು ವಿಚಾರಣೆಗೆ ಎದುರಿಸಿದರು.
Advertisement
ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದ ಎ3 ಆರೋಪಿ ಮಲ್ಲಿಕಾರ್ಜುನ ಹಾಗೂ ಎ4 ಆರೋಪಿ ದೇವರಾಜು ಅವರಿಗೆ ನೋಟಿಸ್ ನೀಡಿ ಅ. ೧೦ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಅದರಂತೆ ಗುರುವಾರ ಮಲ್ಲಿಕಾರ್ಜುನ ಮತ್ತು ದೇವರಾಜು ನಗರದಲ್ಲಿರುವ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು.
ಸತತ ಎಂಟು ಗಂಟೆಗಳ ಕಾಲ ಈ ಇಬ್ಬರು ವಿಚಾರಣೆ ಎದುರಿಸಿದರು.
ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿಚಾರಣೆಯನ್ನು ನಡೆಸಿದ್ದಾರೆ.
ಮೈಸೂರಿನ ಕೆಸರೆ ಗ್ರಾಮಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದರು.
Advertisement
Next Article