HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಕತ್ತು ಕುಯ್ದು ಯುವಕನ‌ ಕೊಲೆ:ವಾಮಾಚಾರ ಶಂಕೆ

ಕೊಲೆಯಾಗಿರುವ ಯುವಕ
05:25 PM Oct 19, 2024 IST | ಅಮೃತ ಮೈಸೂರು
Advertisement

ನಂಜನಗೂಡು: ಕತ್ತು ಕುಯ್ದು ಯುವಕನ‌ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು,ವಾಮಾಚಾರದ ಶಂಕೆ‌ ವ್ಯಕ್ತವಾಗಿದೆ.

Advertisement

ಮಾಲ್ಕುಂಡಿ ಗ್ರಾಮದ ಸದಾಶಿವ(43) ಕೊಲೆಯಾಗಿರುವ ವ್ಯಕ್ತಿ.

ತಾಲೂಕಿನ ಮಡುವಿನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪ ನೀರು ಹರಿಯುವ ಸ್ಥಳದಲ್ಲಿ
ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ
ವ್ಯಕ್ತಿಯನ್ನ ನೋಡಿದ ಸ್ಥಳೀಯರು ಹುಲ್ಲಹಳ್ಳಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು.

ಪಿಎಸ್ಸೈ ಚೇತನ್ ಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನರಳಾಡುತ್ತಿದ್ದ ಸದಾಶಿವ (43) ನನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆ,ಆದರೆ ಆತ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಈತನ ದೇಹ ಪತ್ತೆಯಾದ ಸ್ಥಳದಲ್ಲಿ ಮಂತ್ರಿಸಿರುವ ನಿಂಬೆಹಣ್ಣು,101 ರೂಪಾಯಿ,ಎಲೆ, ಅಡಿಕೆ ಪತ್ತೆಯಾಗಿದ್ದು,
ಹುಣ್ಣಿಮೆ ಹಿನ್ನಲೆ ವಾಮಾಚಾರ ನಡೆಸಿ ಕೊಲೆ ಮಾಡಿರಬಹುದೆಂದು ಗ್ರಾಮಸ್ಥರು ದೂರಿದ್ದಾರೆ.

ಹುಲ್ಲಹಳ್ಳಿ ಠಾಣೆ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement
Tags :
MysoreNanjanagudu
Advertisement
Next Article