ಒಂದು ದೇಶ, ಒಂದು ಚುನಾವಣೆ: ಹೇಮಾ ನಂದೀಶ್ ಶ್ಲಾಘನೆ
03:21 PM Sep 20, 2024 IST
|
ಅಮೃತ ಮೈಸೂರು
Advertisement
ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ನಿರ್ಧಾರ ಸಮರ್ಥವಾದುದು ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್ ಶ್ಲಾಘಿಸಿದ್ದಾರೆ.
Advertisement
ಕೇಂದ್ರದ ಈ ನಿರ್ಣಯ ಚುನಾವಣೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿರುವುದರಿಂದ ಒಂದೇ ಮತದಾರರ ಪಟ್ಟಿ ಎಲ್ಲಾ ಚುನಾವಣೆಗೂ ಬಳಕೆಗೆ ಅವಕಾಶವಿದೆ,ಹಾಗಾಗಿ ಸಮಯದ ಜತೆಗೆ ಹಣ ಉಳಿತಾಯವಾಗಲಿದೆ ಎಂದು ಹೇಮಾನಂದೀಶ್ ತಿಳಿಸಿದ್ದಾರೆ.
Advertisement
Next Article