HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಅರಮನೆ ಆವರಣದಲ್ಲಿ ಪೊಲೀಸ್ ವಾದ್ಯಮೇಳ:ಹರಿದು ಬಂದ ಜನ ಸಾಗರ

ದಸರಾಪ್ರಯುಕ್ತ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಅರಮನೆ‌ ಆವರಣದಲ್ಲಿ ಆಯೋಜಿಸಿದ್ದ, ವಾದ್ಯಮೇಳ ವೀಕ್ಷಿಸಲು ಜನರ ಜನ ಸಾಗರವೇ ಹರಿದು ಬಂದಿತ್ತು.
04:51 PM Oct 09, 2024 IST | ಅಮೃತ ಮೈಸೂರು
Advertisement

ಮೈಸೂರು: ನಾಡಹಬ್ಬ ಮೈಸೂರು ದಸರಾಪ್ರಯುಕ್ತ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಅರಮನೆ‌ ಆವರಣದಲ್ಲಿ ಆಯೋಜಿಸಿದ್ದ, ವಾದ್ಯಮೇಳ ವೀಕ್ಷಿಸಲು ಜನರ ಜನ ಸಾಗರವೇ ಹರಿದು ಬಂದಿತ್ತು.

Advertisement

ರಾಜ ಕಹಳೆ ಮೊಳಗಿಸುವ ಮೂಲಕ ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಕರ್ನಾಟಕ‌ ಪೊಲೀಸ್ ಅವರು ಬರಮಾಡಿಕೊಂಡರು.

ಕರ್ನಾಟಕದ ವಿವಿಧ ಜಿಲ್ಲೆಗಳ
400 ಕ್ಕಿಂತಲೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡ ಆಕರ್ಷಕ ವಿವಿಧ ವಿನ್ಯಾಸಗಳ ಸಾಮೂಹ ವಾದ್ಯಮೇಳವನ್ನು ಪ್ರದರ್ಶಿಸಿತು.

ಕನಕದಾಸರ ಕೀರ್ತನೆಯಾದ ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ ಎಂಬ ವಾದ್ಯಮೇಳಕ್ಕೆ ಜನರು ಮೂಕ ವಿಸ್ಮಿತರಾದರು.

ಮಧ್ವಾಚಾರ್ಯರ ಕೃತಿ ಪ್ರೇಣಯಾಮೋ ವಾಸುದೇವಂ ವಾದ್ಯಕ್ಕೆ ಜನರು ಮನಸೋತರು. ಸಂತ ತುಳಸಿದಾಸರ ಕೃತಿ ಶ್ರೀ ರಾಮಚಂದ್ರ ಕೃಪಾಲು ಭಜಮನ ವಾದ್ಯಗಳನ್ನು ವಾದ್ಯವೃಂದದವರು ಪ್ರಸ್ತುತ ಪಡಿಸಿದರು.

ಆಂಗ್ಲ ವಾದ್ಯ ವೃಂದದವರು ಹರ್ಮನ್ ಸ್ಪಾರ್ಕ್ ಅವರ ಲೈಟ್ ಕವಾಲಿ, ಎ ಆರ್ ರೆಹಮಾನ್ ಅವರ ಯಶಸ್ವಿ ಆರು ಗೀತೆಗಳನ್ನು ಒಟ್ಟುಗೂಡಿಸಿ ಬಹು ವಾದ್ಯೋಪಕರಣಗಳನ್ನು ಬಳಸಿ ತಮ್ಮದೇ ಆದ ಶೈಲಿಯ ವಾದ್ಯಮೇಳವನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಜಿ.ಪರಮೇಶ್ವರ, ಸತೀಶ್ ಎಲ್ ಜಾರಕಿಹೊಳಿ, ಡಾ.ಹೆಚ್ ಸಿ‌ ಮಹದೇವಪ್ಪ, ಬೆಂಗಳೂರಿನ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದ ಅಲೋಕ್ ಮೋಹನ್, ಶಾಸಕರಾದ ಟಿ. ಎಸ್.ಶ್ರೀವತ್ಸ, ತನ್ವೀರ್ ಸೇಠ್, ಪೊಲೀಸ್ ಆಯುಕ್ತರಾದ ಸೀಮಾ‌ ಲಾಟ್ಕರ್ ಮತ್ತಿತರರು ಉಪಸ್ಥಿತರಿದ್ದರು.

Advertisement
Tags :
DusseharaMysorePalace
Advertisement
Next Article