HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ರಾಜಾ ಕಾಲುವೆ ಮೇಲೆ‌ ಕಟ್ಟಿದ್ದ ಕಟ್ಟಡ ತೆರವು

ಮೈಸೂರಿನ ಕೆಸಿ ಬಡಾವಣೆಯಲ್ಲಿ ಅಕ್ರಮವಾಗಿ ರಾಜ ಕಾಲುವೆ ಮೇಲೆ ಕಟ್ಟಿದ್ದ ಕಟ್ಟಡವನ್ನು ತೆರವುಗೊಳಿಸಲಾಯಿತು
12:35 PM Aug 08, 2024 IST | ಅಮೃತ ಮೈಸೂರು
Advertisement

ಮೈಸೂರು,ಆ.8: ರಾಜಾ ಕಾಲುವೆಯನ್ನೆ ಆಕ್ರಮಿಸಿಕೊಂಡು ನಿರ್ಮಿಸಲಾಗಿದ್ದ ಕಟ್ಟಡವನ್ನ ತಾಲೂಕು ಆಡಳಿತ ತೆರವು ಗೊಳಿಸಿತು.

Advertisement

ಅಕ್ರಮ ಕಟ್ಟಡದ ಬಗ್ಗೆ ಆರ್.ಟಿ.ಐ
ಕಾರ್ಯಕರ್ತ ಬಿ.ಎನ್.ನಾಗೇಂದ್ರ ನೀಡಿದ ದೂರಿನ ಅನ್ವಯ ದಾಖಲೆಗಳನ್ನ ಪರಿಶೀಲಿ ಸಿದ ತಹಸೀಲ್ದಾರ್ ಮಹೇಶ್ ಕುಮಾರ್ ಕಟ್ಟಡವನ್ನ ತೆರುವುಗೊಳಿಸಿದ್ದಾರೆ.

ಮೈಸೂರಿನ ಕುರುಬಾರಹಳ್ಳಿ ಗ್ರಾಮದ ಸರ್ವೆ ನಂ.4ರ ಕೆ.ಸಿ.ಬಡಾವಣೆಯಲ್ಲಿ ಹಾದು ಹೋಗಿರುವ ರಾಜಾಕಾಲುವೆಯನ್ನು ಆಕ್ರಮಿಸಿಕೊಂಡು ಚಂದ್ರಶೇಖರ್ ಎಂಬಾತ ನಕಲಿ ದಾಖಲೆಗಳನ್ನ ಸೃಷ್ಟಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಲ್ಲದೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಪಡೆದಿದ್ದರು.

ಜೆಸಿ ನಗರ ನಿವೇಶನ ಸಂಖ್ಯೆ 309/1 ರ ಹೆಸರಿನಲ್ಲಿ ವಲಯ ಕಚೇರಿ 1ರಲ್ಲಿ ಕಂದಾಯ ಪಾವತಿಸಿ ನಕಲಿ ದಾಖಲೆ ಸೃಷ್ಟಿಸಿಕೊಂಡು ಕೆಸಿ ಬಡಾವಣೆಯಲ್ಲಿ ರಾಜಾಕಾಲುವೆ ಮತ್ತು ಬಫರ್ ಜೋನ್ ಮೇಲೆ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದರು.

ಆರ್ ಟಿ ಐ ಮೂಲಕ ಈ ಬಗ್ಗೆ ಮಾಹಿತಿ ಪಡೆದ ಬಿ.ಎನ್.ನಾಗೇಂದ್ರ ತಹಸೀಲ್ದಾರ್ ರವರಿಗೆ ಲಿಖಿತ ದೂರು ನೀಡಿದ್ದರು.

ಕೂಡಲೇ ಎಚ್ಚೆತ್ತ ತಹಸೀಲ್ದಾರ್ ಮಹೇಶ್ ಕುಮಾರ್ ದಾಖಲೆ ಪರಿಶೀಲಿಸಿ ಅಕ್ರಮವೆಂದು ದೃಢಪಡಿಸಿಕೊಂಡು ನಜರಬಾದ್ ಪೊಲೀಸರ ನೆರವಿನಲ್ಲಿ ಖುದ್ದು ಹಾಜರಾಗಿ ಕಟ್ಟಡ ತೆರುವುಗೊಳಿಸಿ,
ಸುಮಾರು ಒಂದು ಕೋಟಿ ಬೆಲೆಬಾಳುವ ಸರ್ಕಾರಿ ಜಾಗವನ್ನ ರಕ್ಷಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಕಸಬಾ ಹೋಬಳಿ ರೆವಿನ್ಯೂ ನಿರೀಕ್ಷಕ ಹೇಮಂತ್ ಕುಮಾರ್, ಗ್ರಾಮ ಆಡಳಿತಾಧಿಕಾರಿ ನಾಗೇಶ್, ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 1 ರ ಅಧಿಕಾರಿ ಮಂಜುನಾಥ ರೆಡ್ಡಿ, ಸಹಾಯಕ ಕಂದಾಯ ಅಧಿಕಾರಿ ನಂದೀಶ್, ನಗರಪಾಲಿಕೆ ರೆವಿನ್ಯೂ ಇನ್ಸ್ ಪೆಕ್ಟರ್ ಮುರುಗೇಶ್, ಚೆಸ್ಕಾಂ ಸಿಬ್ಬಂದಿ ಭಾಗವಹಿಸಿದ್ದರು.

Advertisement
Tags :
KC layoutMysoreRajakalyve
Advertisement
Next Article